ಮಂಗಳೂರು: ನಗರದಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಎಡೆಬಿಡದೆ ಸುರಿದ ತೀವ್ರ ಮಳೆಯಿಂದ ಅಕಾಲಿಕ ಸಾವನ್ನಪ್ಪಿದ ಇಬ್ಬರು ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಲಾ 5 ಲಕ್ಷ ರೂ. ಪರಿಹಾರವನ್ನು ಬುಧವಾರ ಬೆಳಗ್ಗೆ ವಿತರಿಸಿದರು.
ಧರೆ ಕುಸಿದು ಸಾವನ್ನಪ್ಪಿದ ಕೆಪಿಟಿ ಉದಯನಗರದ ನಿವಾಸಿ ಮೋಹಿನಿ (60) ಹಾಗು ಕೊಡಿಯಲ್ ಬೈಲ್ ಪಿವಿಎಸ್ ಕಲಾಕುಂಜ ಸಮೀಪದ ಮಹಿಳೆ ಮುತ್ತಾಬಾಯಿ (80) ಅವರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಪರಿಹಾರ ವಿತರಿಸಿ, ಸಾಂತ್ವನ ಹೇಳಿದ್ದಾರೆ.

