ಬಂಟ್ವಾಳ: ಅಕ್ರಮ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನ ಸಹಿತ ಆರೋಪಿಯನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಾಡಾಜೆ ಎಂಬಲ್ಲಿ ಅಕ್ರಮವಾಗಿ ಪರವಾನಿಗೆ ರಹಿತ ಸುಮಾರು ನಾಲ್ಕು ಲಕ್ಷ ಮೌಲ್ಯದ ಮರದ ದಿಮ್ಮಿಗಳನ್ನು ಸಾಗಟ ಮಾಡುತ್ತಿದ್ದ ವಾಹನವನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳನ್ನು ವಶಪಡಿಸಿಕೊಂಡು ಚಾಲಕ ಕೊಳ್ನಾಡು ಅಬ್ದುಲ್ ರಜಾಕ್ ಎಂಬಾತನನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಗೊಳಸಿದ್ದಾರೆ.
ಕಾರ್ಯಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸುರೇಶ್ .ಬಿ. ಉಪವಲಯಾರಣ್ಯಾಧಿಕಾರಿ ಪ್ರೀತಂ ಅರಣ್ಯ ರಕ್ಷಕರಾದ ಜಿತೇಶ್ .ಪಿ, ದಯಾನಂದ, ವಿನಯಕುಮಾರ್, ಶಿವಲಿಂಗ ಸ್ವಾಮಿ ಭಾಗವಸಿದ್ದರು.

