ಬೆಂಗಳೂರು: ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿರುವ ಕಾರಣದಿಂದಾಗಿ ತಮಿಳುನಾಡಿಗೆ ನೀರು ಬಿಡಲು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.
ಕಾವೇರಿ ಕೊಳ್ಳದಲ್ಲಿ ಭರ್ಜರಿ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ನೀರು ಬಿಡಲು ಸೂಚಿಸಿದ್ದು, ಅಧಿಕಾರಿಗಳು ಇದನ್ನು ಪಾಲಿಸಿದ್ದಾರೆ.
ಮಳೆಯಿಂದಾಗಿ ಜಲಾಶಯ ತುಂಬಿರುವ ಕಾರಣ ಕರ್ನಾಟಕ ಮತ್ತು ತಮಿಳುನಾಡು ಮಧ್ಯೆ ನೀರಿಗೆ ಯಾವುದೇ ರೀತಿ ಸಮಸ್ಯೆಯಾಗದು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

