ಬಂಟ್ವಾಳ: ಕ್ಷೇತ್ರದ ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆದ ಮೊದಲ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ.
ತಾಲೂಕಿನ ಇರ್ವತ್ತೂರು ಗ್ರಾಮ ಪಂಚಾಯತ್ಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಮೊದಲ ಉಪಚುನಾವಣೆ ಇದಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಇದು ಪ್ರತಿಷ್ಠೆಯಾಗಿ ಕಣವಾಗಿತ್ತು.
ಇದು ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಗೆಲುವಿನ ಬಗ್ಗೆ ರಮಾನಾಥ ರೈ ಹರ್ಷ ಹೊರಹಾಕಿದ್ದಾರೆ.

