ಬೆಂಗಳೂರು: ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡರ ಪುತ್ರನ ಹಗರಣದ ಹಿಂದೆ ಕೈವಾಡ ಇದೆ ಎಂದು ಬಹಿರಂಗಗೊಂಡಿದೆ. ಕೇಂದ್ರ ಸಚಿವರರೊಬ್ಬರ ಜೊತೆಗೆ ಮತ್ತೊಬ್ಬ ನಾಯಕ ಕೈಜೋಡಿಸಿದ್ದಾರೆನ್ನಲಾಗಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ.

ಪ್ರಧಾನಿಯವರಿಗೆ ಸದಾನಂದ ಗೌಡರು ಹತ್ತಿರವಾಗಿರುವುದು ಇದಕ್ಕೆ ಕಾರಣವಾಗಿದೆ.ಮೈತ್ರಿಯಾ ಪೊಲೀಸರ ವಿಚಾರಣೆಯವೇಳೆ ತಬ್ಬಿಬ್ಬುಗೊಳ್ಳುತಿದ್ದಾರೆ. ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಅತ್ಯಾಚಾರ ನಡೆದಿಲ್ಲ. ಆದರೆ ಅವರಿಬ್ಬರ ಮಧ್ಯೆ ಸಂಬಂಧ ಇತ್ತೇ ಎಂಬ ಬಗ್ಗೆ ವೈದ್ಯಕೀಯ ಪರೀಕ್ಷೆ ಮುಂದುವರಿದಿದೆ. ಈ ಬಗ್ಗೆ ಪೊಲೀಸರು ಕಾರ್ತಿಕ್ ಗೌಡನಿಗೆ ವಿಚಾರಣೆಗೆ ಬರಲು ನೋಟಿಸ್ ಜಾರಿಗೊಳಿಸಿದ್ದಾರೆ. ಒಟ್ಟಿನಲ್ಲಿ ಪ್ರಕರಣ ತಿರುವು ಪಡೆಯುವ ಸಾಧ್ಯತೆ ಇದೆ.
