ಮಂಗಳೂರು: ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಬಿ.ಸಿ. ರೋಡ್ ಎಸ್ ಡಿ ಸಿ ಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಪಿ.ಆನಂದ ವಿಟ್ಲ ಅವರ ಬೀಳ್ಕೊಡುಗೆ ಸಮಾರಂಭವು ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ. ರಾಜಾರಾಮ ಭಟ್, ಎಂ.ವಾದಿರಾಜ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು, ಸದಾಶಿವ ಉಳ್ಳಾಲ್, ಕೆ.ಎಸ್. ದೇವರಾಜ್, ಬಿ.ರಘುರಾಮ ಶೆಟ್ಟಿ, ಎಸ್.ರಾಜು ಪೂಜಾರಿ, ರಾಜೇಶ್ ರಾವ್, ಎಸ್ .ಬಿ. ಜಯರಾಮ ರೈ, ಡಾ. ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಸಹಕಾರ ಸಂಘದ ಉಪನಿಬಂಧಕ ಬಿ ಕೆ ಸಲೀಂ, ಸಹಾಯಕ ನಿಬಂಧಕ ಮಂಜುನಾಥ ಸಿಂಗ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

