ಬಂಟ್ವಾಳ : ಕರ್ನಾಟಕ ರಾಜ್ಯ ವಕೀಲರ ಪರಿಷತ್ ಸದಸ್ಯರಾಗಿ 3ನೇ ಬಾರಿಗೆ ದ.ಕ.ಜಿಲ್ಲೆಯ ಏಕೈಕ ಸದಸ್ಯರಾಗಿ ಆಯ್ಕೆಯಾದ ನ್ಯಾಯವಾದಿ ಪದ್ಮಪ್ರಸಾದ್ ಹೆಗಡೆ ಯವರನ್ನು ಬಂಟ್ವಾಳ ವಕೀಲರ ಸಂಘದ ವತಿಯಿಂದ ಸಂಘದ ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀ ಶ ರಾದ ಮಹಮ್ಮದ್ ಇಮ್ತಿಯಾಜ್ ಅಹಮ್ಮದ್ , ಹೆಚ್ಚುವರಿ ಸಿವಿಲ್ ನ್ಯಾಯಾಧೀ ಶೆ ಪ್ರತಿಭಾ ಡಿ.ಎಸ್. , ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಹಿರಿಯ ವಕೀಲರಾದ ಎ.ಕೆ.ರಾವ್, ಪ್ರಧಾನ ಕಾರ್ಯದರ್ಶಿ ಆಶಾ ಪ್ರಸಾದ್ ರೈ, ಕೋಶಾಧಿಕಾರಿ ಚಂದ್ರಶೇಖರ ಬೈರಿಕಟ್ಟೆ, ನ್ಯಾಯವಾದಿ ವಿರೇ ಂದ್ರ ಎಂ.ಸಿದ್ದಕಟ್ಟೆ ಹಾಗೂ ಹಿರಿಯ ಕಿರಿಯ ವಕೀಲಮಿತ್ರರು ಉಪಸ್ಥಿತರಿದ್ದರು.

