ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್ ಜುಲೈ 22ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 8.30ಕ್ಕೆ ಚೇಳ್ಯಾರ್ನಲ್ಲಿ ನಡೆಯುವ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟಕ್ಕೆ ತೆರಳಲಿದ್ದಾರೆ. ಅಲ್ಲಿಂದ ಬೆಳಗ್ಗೆ 10.30ಕ್ಕೆ ಮೂಲ್ಕಿ ಬಿಲ್ಲವ ಮಹಾಮಂಡಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 11.30ಕ್ಕೆ ಸುರಗಿರಿಯ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ನಂತರ ಮಧ್ಯಾಹ್ನ 12 ಗಂಟೆಗೆ ಪದವಿನಂಗಡಿಯ ಪೆರ್ಲಗುರಿಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ss 3 ಗಂಟೆಗೆ ಪಡುಪಣಂಬೂರು ಕಲ್ಲಾಪು ದೇವಸ್ಥಾನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ಸಂಜೆ 4.30ಕ್ಕೆ ಹಳೆಯಂಗಡಿ ಜಾರಂದಾಯ ದೈವಸ್ಥಾನದ ಬಳಿ ಕಾರ್ಯಕರ್ತರ ಸಭೆ ನಡೆಯಲಿದೆ. ದಿನದ ಕೊನೆಯ ಕಾರ್ಯಕ್ರಮ ಮಂಗಳೂರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಲಿದ್ದಾರೆ.

