ಮಂಗಳೂರು: ದ.ಕ ಜಿಲ್ಲಾಡಳಿತ , ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ವಿವಿ ಎನ್ನೆಸ್ಸೆಸ್ ,ಸ್ಕೌಟ್ ಆ್ಯಂಡ್ ಗೈಡ್ಸ್, ಮಂಗಳೂರು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಮಂಗಳೂರಿನಲ್ಲಿ ಇತ್ತೀಚಿಗೆ ಪ್ರಕೃತಿ ಸಂರಕ್ಷಣಾ ದಿನಾಚರಣೆ ಮತ್ತು ವನ ಮಹೋತ್ಸವ ಸಮಾರಂಭ ನಡೆಯಿತು.

ಸ್ವಚ್ಛ ಭಾರತ ಅಭಿಯಾನದಲ್ಲಿ ಸ್ವಚ್ಛತಾ ಆಂದೋಲನಗಳ ಮೂಲಕ ಕೊಡುಗೆ ನೀಡಿದ ಮತ್ತು ಜಾಗೃತಿ ಮೂಡಿಸಿದ ಮೂಡುಬಿದಿರೆ ರೋಟರಿ ಕ್ಲಬ್ಗೆ ಪರಿಸರ ಪ್ರಶಸ್ತಿಯನ್ನು ಶಾಸಕ ವೇದವ್ಯಾಸ ಕಾಮತ್ ನೀಡಿ ಗೌರವಿಸಿದರು.
ರೋಟರಿ ಅಧ್ಯಕ್ಷ ಡಾ. ರಮೇಶ್, ನಿಕಟಪೂರ್ವ ಅಧ್ಯಕ್ಷ ಶ್ರೀಕಾಂತ್ ಕಾಮತ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
