ಮೂಡುಬಿದಿರೆ : ಇಲ್ಲಿನ ರೋಟರ್ಯಾಕ್ಟ್ ಕ್ಲಬ್ ವತಿಯಿಂದ ಆಟೋ ರಿಕ್ಷಾದವರಿಗೆ ರಸ್ತೆ ಸುರಕ್ಷತಾ ನಿಯಮದ ಕುರಿತಾದ ಸ್ಟಿಕ್ಕರನ್ನು ಇತ್ತೀಚೆಗೆ ವಿತರಿಸಿ ಜಾಗೃತಿ ಮೂಡಿಸಲಾಯಿತು. ಕೊಡಂಗಲ್ಲು ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ವನಮಹೋತ್ಸವವನ್ನು ಆಚರಿಸಲಾಯಿತು.
ರೋಟರ್ಯಾಕ್ಟ್ ಸಭಾಪತಿ ಸುನೀಲ್, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಪವನ್ ಭಟ್ ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

