ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆಯಬೇಕಿದ್ದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸಮಾರೋಪ ಕಾರ್ಯಕ್ರಮ ರದ್ದುಗೊಳಿಸಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಮಿತಿ ಪ್ರಮುಖರಾದ ರತ್ನಕುಮಾರ್ ಚೌಟ, ಶ್ರೀಧರ ಎಸ್.ಪಿ, ಶಿಕ್ಷಣ ಸಂಯೋಜಕಿ ಸುಶೀಲ, ಗಣೇಶ್, ಸುಕುಮಾರ್, ನಿವೃತ್ತ ಮುಖ್ಯಶಿಕ್ಷಕ ರಮೇಶ್ ನಾಯಕ್ ರಾಯಿ, ಉಪಪ್ರಾಂಶುಪಾಲ ರಮಾನಂದ, ಬಿ.ರಾಮಚಂದ್ರ ರಾವ್, ಮತ್ತಿತರರು ಉಪಸ್ಥಿತರಿದ್ದರು.

