ವಿಟ್ಲ: ರೋಟರಿ ಕ್ಲಬ್ ವತಿಯಿಂದ `ಸದಸ್ಯತ್ವ ಬೆಳವಣಿಗೆ’ ಕಾರ್ಯಾಗಾರವು ವಿಟ್ಲದ ಗಜಾನನ ಸಭಾ ಭವನದಲ್ಲಿ ನಡೆಯಿತು. ಕಾರ್ಯಗಾರದಲ್ಲಿ ಪುತ್ತೂರಿನ ಡಾ| ಶಶಿಧರ ಕಜೆ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ನಿಕಟ ಪೂರ್ವ ಅಧ್ಯಕ್ಷ ಸಂಜೀವ ಪೂಜಾರಿ, ಮಾತೃ ಸಂಸ್ಥೆ ಪುತ್ತೂರು ಸಿಟಿ ಕ್ಲಬ್ ನ ಪದಾಧಿಕಾರಿಗಳು, ಸದಸ್ಯರು ಮತ್ತು ವಿಟ್ಲ ಕ್ಲಬ್ನ ಸದಸ್ಯರು ಭಾಗವಹಿಸಿದ್ದರು.
ವಿಟ್ಲ ರೋಟರಿ ಕ್ಲಬ್ ಅಧ್ಯಕ್ಷ ಡಾ| ಚರಣ್ ಕಜೆ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಚೇತನ್ ಜೈನ್ ವಂದಿಸಿದರು.

