ಮಂಗಳೂರು: ಏಶಿಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ರಿಲೇಯಲ್ಲಿ ಚಿನ್ನದ ಪದಕ ಗಳಿಸಿ ನಮ್ಮ ದೇಶ, ಕರ್ನಾಟಕ ಮತ್ತು ಮಂಗಳೂರು ನಗರಕ್ಕೆ ಕೀರ್ತಿ ತಂದ ಪೂವಮ್ಮ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಸಂಜಯ ಪ್ರಭು, ಪ್ರಭಾ ಮಾಲಿನಿ, ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ, ವಸಂತ ಜೆ ಪೂಜಾರಿ, ಪ್ರೇಮಾನಂದ ಶೆಟ್ಟಿ, ಪೂರ್ಣಿಮಾ, ರೂಪಾ ಡಿ ಬಂಗೇರು ಉಪಸ್ಥಿತರಿದ್ದರು .

