ಕೈಕಂಬ:ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಧ್ಯಮ ಶಾಲೆ ಕೈಕಂಬ ಇಲ್ಲಿ ಗಾಂಧಿಜಯಂತಿ ಆಚರಣೆ ನಡೆಯಿತು. ಶಾಲಾ ಸಂಚಾಲಕಿ ಪ್ಲೋರೆನ್ಸ್ ಮೆಂಡಿಸ್ ಕಾರ್ಯಕ್ರಮ ಉದ್ಘಾಟಿಸಿ ಗಾಂಧೀಜಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆನೀಡಿದರು.
ವಿದಾರ್ಥಿಗಳಿಂದ ಭಾಷಣ, ಹಾಡು, ಗಾಂಧಿಸ್ಮರಾಣೆ ನಡೆಯಿತು. ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಸ್ವರ್ಣಲತಾ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ವೀಣಾ ಸ್ವಾಗತಿಸಿ ಶೋಭಾ ವಂದಿಸಿದರು. ವೀಣಾಶಾರದಾ ಕಾರ್ಯಕ್ರಮ ನಿರುಪಿಸಿದರು. ನಂತರ ವಿದ್ಯಾರ್ಥಿಗಳು ಶಾಲಾ ಆವರಣದ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೋಳಿಸಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ನಡೆಸಿಕೋಟ್ಟರು.
