ಮೂಡುಬಿದಿರೆ: ಅಭಿವೃದ್ಧಿಯಲ್ಲಿ ವಿನೂತನ ಯೋಜನೆಗಳನ್ನು ಕೈಗೊಂಡು ಗ್ರಾಮದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುವ ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳುವಾಯಿ ಗ್ರಾಮ ಪಂಚಾಯಿತಿ ಭಾಜನವಾಗಿದೆ.

ವಿಧಾನ ಸೌಧದಲ್ಲಿ ಮಂಗಳವಾರ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರಿಂದ ಬೆಳುವಾಯಿ ಗ್ರಾ.ಪಂ ಅಧ್ಯಕ್ಷ ಭಾಸ್ಕರ ಆಚಾರ್ಯ ಪ್ರಶಸ್ತಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ, ಬೆಳುವಾಯಿ ಪಿಡಿಒ ಭೀಮಾ ನಾಯ್ಕ್ ಉಪಸ್ಥಿತರಿದ್ದರು.
