ಬಂಟ್ವಾಳ: ಇಲ್ಲಿನ ವಿದ್ಯಾಗಿರಿ ಪಡಿಬಾಗಿಲಿನ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಗಾಂಧಿ ಜಯಂತಿ ಸಂದರ್ಭದಲ್ಲಿ ಖ್ಯಾತ ಸ್ಯಾಕ್ಸೋಫೋನ್ ವಾದಕ, ಯು ಎಸ್ ಎ ತಮಿಳು ವಿ ವಿ ಯಿಂದ ಗೌರವ ಡಾಕ್ಟರೇಟ್ ಪುರಸ್ಕøತ ವಿ ಕೆ ದಾಮೋದರ ಇವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ ವಹಿಸಿದ್ದರು.

sanmana
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ರೇಖಾ, ಇತರ ಸದಸ್ಯರು, ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಮತ್ತು ಸದಸ್ಯರು, ಮುಖ್ಯ ಶಿಕ್ಷಕಿ ಶಶಿಕಲಾ, ಸಹಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನುಫಾತಿಮತ್ ನಸ್ರೀನಾ ಸ್ವಾಗತಿಸಿದರು. ಸಮೀಕ್ಷಾ ವಂದಿಸಿದರು. ಆಸಿಯತ್ ಸಫ್ರೀನಾ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *