ಬಂಟ್ವಾಳ: ಕೊಳ್ನಾಡು-ಸಾಲೆತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆ ಹಾಗೂ ಕೊಳ್ನಾಡು ಗ್ರಾಮ ಪಂಚಾಯತ್ ಆಶ್ರಯದಲ್ಲಿ 94ಸಿ ಹಾಗೂ ವಿವಿಧ ಸವಲತ್ತುಗಳ ವಿತರಣ ಕಾರ್ಯಕ್ರಮ ನಡೆಯಿತು.
ಅನೇಕ ವರ್ಷಗಳಿಂದ ಮನೆ ಕಟ್ಟಿಸಿಕೊಂಡು ದಾಖಲಾತಿ ಇಲ್ಲದ ವಿಚಾರವನ್ನು ಮನಗೊಂಡು ಅಂದಿನ ಬಿ.ಜೆ.ಪಿ ಸರಕಾರ ತಂದಿರುವ 94ಸಿ ಯೋಜನೆಯಿಂದ ಅನೇಕರಿಗೆ ಮನೆಯ ಅಡಿಸ್ಥಳದ ದಾಖಲೆ ಸಿಕ್ಕಿರುವುದು ಅಮೃತ ಸಿಕ್ಕಂತಾಗಿದೆ. ಇಂತಹ ಜನಪರ ಯೋಜನೆಗಳು ಇನ್ನಷ್ಟು ಜಾರಿಗೊಳ್ಳಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯು ನೆಮ್ಮದಿಯಿಂದ ಗೌರವದಿಂದ ಬದುಕು ಸಾಗಿಸುವಂತಾಗಲಿ. ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶುಭ ಹಾರೈಸಿದರು.

btl
ಬಳಿಕ ದೀರ್ಘಕಾಲದಿಂದ ಬಾಕಿ ಉಳಿದಿದ್ದ ಸರಕಾರದ ವಿವಿಧ ಸವಲತ್ತುಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದರು.  ಕಂದಾಯ ನಿರೀಕ್ಷಕರು ದಿವಾಕರ ಪ್ರಾಸ್ತಾವಿಕ ಮಾತುಗಳನ್ನಾಡಿದ್ದರು.
ಈ ಸಂದರ್ಭದಲ್ಲಿ ತಾ.ಪಂ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು, ಉಪತಹಶೀಲ್ದಾರರು ಉಪಸ್ಥಿತರಿದ್ದರು. ಕೊಳ್ನಾಡು ಗ್ರಾಮ ಅನಿಲಿಕುಮಾರ್ ಸ್ವಾಗತಿಸಿ, ಫಲಾನುಭವಿಗಳ ಪಟ್ಟಿ ವಾಚಿಸಿದರು. ಕೊಳ್ನಾಡು ಪಂಚಾಯತ್ ಅಭಿವೃದ್ಧಿ ಅಧಿಕಾರ ಸುಧೀರ್ ಕುಮಾರ್ ವಂದಿಸಿದರು. ಕೊಳ್ನಾಡು ಮಹಾಶಕ್ತಿ ಕೇಂದ್ರ ಅಧ್ತಕ್ಷರಾದ ಬಾಲಕೃಷ್ಣ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *