ಬಂಟ್ವಾಳ: ಇಲ್ಲಿನ ಬೊಳಂತಿಮೊಗರು ದ ಕ ಜಿ ಪಂ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ವಿಶ್ವನಾಥ ಗೌಡ ನಾಯ್ತೊಟ್ಟು ಇವರ ಅಧ್ಯಕ್ಷತೆಯಲ್ಲಿ ಸಮುದಾಯದತ್ತ ಕಾರ್ಯಕ್ರಮ ನಡೆಯಿತು.
ನೋಡೆಲ್ ಅಧಿಕಾರಿಯಾಗಿ ಪ್ರೌಢ ಶಾಲಾ ಶಿಕ್ಷಕ ಪ್ರವೀಣ್ ಕುಮಾರ್ ಭಾಗವಹಿಸಿದ್ದರು.

ಈ ಸಂದರ್ಬದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವನಿತಾ ಮಾಮೇಶ್ವರ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋಧ ಕೆ ಕೆ, ನಾರಾಯಣ ಗೌಡ, ರೇವತಿ ಕೊಡಿಮಜಲು, ಧನವತಿ, ಬಬಿತಾ, ಸುಮಲತಾ, ಆಂಜನೇಯ ಆಲದಕಟ್ಟೆ, ಮಾಧವ ಕುದ್ರೆತ್ತಾಯ, ಉಮೇಶ ಬಿ, ನೇತ್ರಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕೇಶವಯ್ಯ ಸ್ವಾಗತಿಸಿ ಪ್ರಸ್ತಾವಿಸಿದರು. ಮುಖ್ಯಶಿಕ್ಷಕ ಸಂಜೀವ ಹೆಚ್ ವಂದಿಸಿದರು. ವಿಠಲ ನಾಯಕ್ ಕಾರ್ಯಕ್ರಮ ನಿರೂಪಿಸಿದರು.
