ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಮರಳು ಮತ್ತು ಭೂಪರಿವರ್ತನೆ ಸಮಸ್ಯೆ ಸೇರಿದಂತೆ ಅಡಿಕೆ ಬೆಳೆಗಾರರಿಗೆ ಕೊಳೆರೋಗ ಪರಿಹಾರಧನ ನೀಡುವಂತೆ ಆಗ್ರಹಿಸಿ ಶನಿವಾರ ಮಿನಿ ವಿಧಾನಸೌಧ ಎದುರು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ಬಳಿಕ ತಹಶೀಲ್ದಾರ್ ಪುರಂದರ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿದರು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಬಿಜೆಪಿ ಕ್ಷೇತ್ರಾಧ್ಯಕ್ಷ ಬಿ.ದೇವದಾಸ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ಹರಿಕೃಷ್ಣ ಬಂಟ್ವಾಳ್ ಮತ್ತಿತರರು ಉಪಸ್ಥಿತರಿದ್ದರು.
