ಬಂಟ್ವಾಳ: ಅರಳ ಗ್ರಾಮದ ಎರ್ಮಾಳ್ ಕಂಡದೊಟ್ಟು ನಿವಾಸಿ, ಹಿರಿಯ ಪ್ರಗತಿಪರ ಕೃಷಿಕ ರಾಮಯ್ಯ ಸಾಲ್ಯಾನ್ ಎರ್ಮಾಳ್ (88) ಇವರು ಅಸೌಖ್ಯದಿಂದ ಗುರುವಾರ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಇವರು ಚಾಲಕರಾಗಿ, ವರ್ತಕರಾಗಿ ಬಳಿಕ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದರು. ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯಲ್ಲಿ ಸಕ್ರಿಯರಾಗಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಅಗಲಿದ್ದಾರೆ.

