ವಿಟ್ಲ : ವಿದ್ಯಾರ್ಥಿಗಳಿಗೆ ವ್ಯವಹಾರದ ಚತುರತೆಯನ್ನು ತಿಳಿಸಿಕೊಡುವ ನಿಟ್ಟಿನಿಂದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮೆಟ್ರಿಕ್ ಮೇಳವನ್ನು ಹಮ್ಮಿಕೊಳ್ಳಲಾಯಿತು. ಬಾಲವಿಕಾಸ ಕ್ರೀಡಾಂಗಣದಲ್ಲಿ ನಡೆದ ಈ ಮೆಟ್ರಿಕ್ ಮೇಳವನ್ನು ಸಂಸ್ಥೆಯ ಸಂಚಾಲಕರಾದ ಜೆ.ಪ್ರಹ್ಲಾದ್ ಶೆಟ್ಟಿ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು  ನಂತರ ಮಾತನಾಡಿದ ಅವರು ಶಾಲೆಯಲ್ಲಿ ನಡೆಸಲ್ಪಡುವ ಪ್ರತಿ ಚಟುವಟಿಕೆಯೂ ಕಲಿಕೆಯ ಒಂದು ಭಾಗ. ವೈಯಕ್ತಿಕ ಜೀವನದ ಸಾಮಾಜಿಕ ಸನ್ನಿವೇಶಗಳಲ್ಲಿ ಹೇಗೆ ವ್ಯವಹರಿಸಬೇಕು? ಎಂಬುದರ ಅರಿವು  ಮೂಡಿಸಲು ಈ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದರು.IMG_2428

ಶಾಲಾ ವಿದ್ಯಾರ್ಥಿಗಳನ್ನೊಳಗೊಂಡ,ವಿವಿಧ ಶೈಕ್ಷಣಿಕ ಸಂಘಗಳ ಜಂಟಿ ಆಶ್ರಯದಲ್ಲಿ ಆಹಾರ, ಪಾನೀಯ ಇತ್ಯಾದಿ ಉತ್ಪನ್ನಗಳ ಹಲವಾರು ಮಳಿಗೆಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸಿದವ ಶಾಲಾ ಆಡಳಿತಾಧಿಕಾರಿ ಸಿ.ಶ್ರೀಧರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮೀ ವಿ. ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಗ್ರೇಸ್ ಪಿ.ಸಲ್ದಾನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *