ಪೊಳಲಿ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಅವರು ತನ್ನ ಧರ್ಮಪತ್ನಿ ಸುಪ್ರಿಯಾ ಹಷೇಂದ್ರ ಕುಮಾರ್ ಜೊತೆ ಭೇಟಿ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು.
ಇವರನ್ನು ಶಾಸಕ-ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಸಂಸದ ನಳಿನ್ ಕುಮಾರ್ ಕಟೀಲ್ ಆಗಮಿಸಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು ನಂತರ ಎಲ್ಲ ವ್ಯವಸ್ಥೆಯನ್ನು ವೀಕ್ಷಿಸಿ ಸಲಹೆ ಸೂಚನೆಗಳನ್ನು ನೀಡಿದರು. ಇವರ ಜೊತೆ ಬಿಜೆಪಿ ಹರಿಕೃಷ್ಣ ಬಂಟ್ವಾಳ್ ಇದ್ದರು.


