ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಮಾಜಿ ಬಂದರು ಮತ್ತುಮೀನುಗಾರಿಕಾ ಸಚಿವ ಪ್ರಮೋದ್ ಮದ್ವರಾಜ್ ಭೇಟಿನೀಡಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು.
ದೇವಳದ ಅರ್ಚಕ ಪರಮೇಶ್ವರ ಭಟ್ ಪ್ರಸಾದನೀಡಿ ಸ್ಮರಣಿಕೆ ನೀಡಿ ಗೌರವಿಸಿದರು. ದೇವಳದ ಅನುವಂಶಿಕ ಮೊಕ್ತೇಸರ ಯು. ತಾರನಾಥ ಆಳ್ವ ,ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ಮಾಜಿ ಪಂ. ಅಧ್ಯಕ್ಷ ಚಂದ್ರಶೇಖರ ಭಂಡಾರಿ,ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ಉಮೇಶ್ ಆಚಾರ್ಯ,ಕರುಣಾಕರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ ಪೊಳಲಿ, ಜಗದೀಶ್ ಪೊಳಲಿ, ಚಂದ್ರಶೇಖರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.


