ಪೊಳಲಿ: ಆರ್ಥಿಕವಾಗಿ ಹಿಂದುಳಿದ ಮತ್ತು ನಾನಾ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದ ಗ್ರಾಮೀಣ ಪ್ರತಿಭಾವಂತ ಹುಡುಗರ ಶಿಕ್ಷಣಕ್ಕೆ ನೆರವಾಗುವ ಅನ್ವಯ ರಾಮಕೃಷ್ಣ ತಪೋವನ ಬಾಲಕಾಶ್ರಮವು ಅರ್ಜಿ ಆಹ್ವಾನಿಸಿದೆ. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ನೆರೆಯ ಜಿಲ್ಲೆಗಳ, 7ನೇ ತರಗತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥೀಗಳು 8ನೇ ತರಗತಿಗೆ ಸೇರಬಹುದು.
ಉಚಿತ ಶಿಕ್ಷಣ, ಊಟ ಮತ್ತು ವಸತಿ ಒದಗಿಸಲಾಗುವುದು. ಜೊತೆಗೆ ಭಜನೆ, ಸಂಗೀತ, ಯಕ್ಷಗಾನ, ಕಂಪ್ಯೂಟರ್, ಯೋಗ, ಶ್ರಮಸೇವೆ, ಭರತನಾಟ್ಯ, ಕರಾಟೆ ಇತ್ಯಾದಿ ತರಬೇತಿ ನೀಡಲಾಗುತ್ತದೆ. ಸುಂದರ ಹಳ್ಳಿಯ ಪರಿಸರದಲ್ಲಿ ಈ ಬಾಲಕಾಶ್ರಮವಿದ್ದು, ಆಸಕ್ತಿಯಿದ್ದ ಹುಡುಗರು 7ನೇ ತರಗತಿಯ ಪರೀಕ್ಷೆ ಮುಗಿದ ಕೂಡಲೇ ವೈಯಕ್ತಿಕ ವಿವರಗಳೊಂದಿಗೆ ದೂರವಾಣಿ ಇಲ್ಲವೆ ಅಂಚೆಯ ಮೂಲಕ ಸಂಪರ್ಕಿಸಬಹುದು. ಬಾಲಕಾಶ್ರಮದ ಪರಿಚಯ-ಮಾಹಿತಿಗಾಗಿ ವಿದ್ಯಾರ್ಥಿಗಳು ಒಂದು ವಾರ ಬಾಲಕಾಶ್ರಮದಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಮಕ್ಕಳ ಮೇಲ್ವಿಚಾರಣೆಯನ್ನು ಸ್ವತಃ ರಾಮಕೃಷ್ಣ ತಪೋವನದ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ವಹಿಸಿಕೊಳ್ಳುವರು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಬಹುದು.
ರಾಮಕೃಷ್ಣ ತಪೋವನ, ಶ್ರೀರಾಜರಾಜೇಶ್ವರಿ ದೇವಸ್ಥಾನದ ಬಳಿ, ಕರಿಯಂಗಳ ಗ್ರಾಮ, ಪೊಳಲಿ ಅಂಚೆ, ಬಂಟ್ವಾಳ ತಾಲೂಕು, ದಕ್ಷಿಣ ಕನ್ನಡ 574 219
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ : 9845165108, 0824-2016455, 2266655
