ಬೆಂಗಳೂರು: ದೇಶಕ್ಕೆ ಏನೂ ಮಾಡದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಮುಖ್ಯ ಗುರಿಯಾಗಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕರೆ ನೀಡಿದ್ದಾರೆ.ಬೆಂಗಳೂರಿನ ಹೊರವಲಯದ ಮಾದವಾರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಪಕ್ಷಗಳು ಬೃಹತ್ ಪರಿವರ್ತನಾ ಸಮಾವೇಶದಲ್ಲಿ ರಾಹುಲ್‌ ಗಾಂಧಿ ತಿಳಿಸಿದರು.ಕಾಂಗ್ರೆಸ್‌ ಮತ್ತು ಜೆಡಿಎಸ್ ಕಾರ್ಯಕರ್ತರು ಈಗ ಒಟ್ಟಗಿ ಕೆಲಸ ಮಾಡಬೇಕು. ಜೆಡಿಎಸ್‌ ಅಭ್ಯರ್ಥಿ ಇದ್ದ ಕಡೆ ಕಾಂಗ್ರೆಸ್‌ ಕಾರ್ಯಕರ್ತರು, ಅದೇ ರೀತಿ ಕಾಂಗ್ರೆಸ್‌ ಅಭ್ಯರ್ಥಿ ಇದ್ದ ಕಡೆ ಜೆಡಿಎಸ್‌ ಕಾರ್ಯಕರ್ತರು ಪ್ರಚಾರ ಮಾಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.ಮೋದಿ ಕೇವಲ ದುಡ್ಡಿನವರು ಹಾಗೂ ಉದ್ಯಮಿಗಳ ಪರವಾಗಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್ ಮಾತ್ರ ಬಡವರು, ರೈತರ ಪರವಾಗಿ ಕೆಲಸ ಮಾಡುತ್ತಿದೆ ಎಂದು ರಾಹುಲ್‌ ತಿಳಿಸಿದರು.

IMG-20190331-WA0023

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮಾತನಾಡಿ, ಈ ಸಮಾವೇಶದ ಮೂಲಕ ದೇಶಕ್ಕೆ ಮೈತ್ರಿ ಕೂಟದ ಬಗ್ಗೆ ಸ್ಪಷ್ಟ ಸಂದೇಶ ರವಾನೆಯಾಗಬೇಕು ಎಂದರು.ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ದೇಶದ ರಾಜಕಾರಣದಲ್ಲಿ ಬದಲಾವಣೆ ಅನಿವಾರ್ಯವಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್-ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ದೇಶದ ರಾಜಕಾರಣದ ಬದಲಾವಣೆಗೆ ಸಾಕ್ಷಿಯಾಗಲಿದೆ ಎಂದರು.ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮಾತನಾಡಿ ರಾಹುಲ್ ಗಾಂಧಿ ಸೂಚನೆ ಮೇರೆಗೆ 2 ಪಕ್ಷಗಳ ಜಂಟಿ ಸಮಾವೇಶ ಆಯೋಜಿಸಿದ್ದು, ದೇಶಕ್ಕೆ ಬದಲಾವಣೆಯ ಸಂದೇಶ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಲವಾರು ನಾಯಕರು ಪರಿವರ್ತನಾ ಸಮಾವೇಶದಲ್ಲಿ ಭಾಗಿಯಾಗಿದ್ದರು.

By suddi9

Leave a Reply

Your email address will not be published. Required fields are marked *