ವಿಟ್ಲ :ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ 625 ಅಂಕಗಳಲ್ಲಿ 624 ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ಇವರನ್ನು ಅವರ ಮನೆ ಶ್ರೀ ಲಕ್ಷ್ಮೀನಿಲಯದಲ್ಲಿ ಮಾಜಿ ಸಚಿವ ರಮಾನಾಥ ರೈ ಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ ಮತ್ತು ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಸದಸ್ಯೆ ಶೋಭಾ ರೈ, ಪಂಚಾಯತ್ ಸದಸ್ಯ ಸಿದ್ದಿಕ್ ಸರಾವು, ವಿಟ್ಲ ಪಡ್ನೂರು ವಲಯಾಧ್ಯಕ್ಷ ಸಂದೇಶ್ ಶೆಟ್ಟಿ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ರೈ, ರಮಾನಾಥ ವಿಟ್ಲ, ಭಾಸ್ಕರ ಶೆಟ್ಟಿ ಬಿ, ಚಿನ್ಮಯಿ ಅಜ್ಜ ಅಜ್ಜಿ ಜಯರಾಮ ಭಟ್ ದಂಪತಿಗಳು, ತಂದೆ ತಾಯಿ ರಾಜನಾರಾಯಣ ಭಟ್ ದಂಪತಿಗಳು ಮತ್ತಿತರರು ಉಪಸ್ಥಿತರಿದ್ದರು.
