ಮಂಗಳೂರು: ಕದ್ರಿ ಶ್ರೀಮಂಜುನಾಥ ದೇವಳದಲ್ಲಿ ಮೇ.9ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಧಾರ್ಮಿಕ ಕಾರ್ಯಕ್ರಮ, ಹೊರೆಕಾಣಿಕೆ, ಭಕ್ತರು ಭಕ್ತಿಯೊಂದಿಗೆ ಸ್ವಯಂಸೇವೆ ಮಾಡುತ್ತಿರುವುದು ಉತ್ಸವಕ್ಕೆ ಮೆರುಗು ನೀಡಿದೆ.
ಬ್ರಹ್ಮಕಲಶೋತ್ಸವದ ಪ್ರಯುಕ್ತ ಶ್ರೀಕ್ಷೇತ್ರದಲ್ಲಿ ಪ್ರತಿದಿನ ಬೆಳಗ್ಗೆ 7 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮದಿಂದ ಪ್ರಾರಂಭಗೊಂಡು ರಾತ್ರಿ 11 ಗಂಟೆಯವರೆಗೆ ಸಾಂಸ್ಕøತಿಕ ಕಾರ್ಯಕ್ರಮ ನಡೆಯುತ್ತಿದ್ದು, ಸಹಸ್ರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ವ್ಯವಸ್ಥಿತ ರೀತಿಯಲ್ಲಿ ಅನ್ನದಾನ ಸೇವೆ, ಪಾರ್ಕಿಂಗ್ ಸೌಲಭ್ಯವಿದೆ. ಅನ್ನಛತ್ರದ ಎದುರು ಇರುವ ಉಗ್ರಾಣ ಆಕರ್ಷಣೆಯ ಕೇಂದ್ರಬಿಂದುವಾಗಿದೆ.













