Published On: Fri, Jun 14th, 2019

ಕವಿತೆ

*ರೈತನ ಕಣ್ಣೀರು*

ರೈತ ದೇಶದ ಬೆನ್ನೆಲುಬು
ಎಂದು ಭಾಷಣ ಬೀಗಿದರೆ ಸಾಕೆ|
ನೋವುಗಳೇ ಗುಡುಗಿ ರೈತನ ಕಣ್ಣೀರು
ಮಳೆಯಾಗಿ ಹರಿಯುವುದು ಯಾಕೆ||
ಮೂರು ಹೊತ್ತು ಅನ್ನವೇ ಬೇಕು
ಪ್ರತಿಯೊಬ್ಬರ ಬದುಕಿನ ನಾಳೆಗೆ|
ಧಾವಿಸಿ ಬನ್ನಿರಿ ಎಲ್ಲರೂ
ಒಗ್ಗಟ್ಟಾಗಿ ಭವಿಷ್ಯದ ಏಳ್ಗೆಗೆ||
ಮುಗಿಲು ಮುಟ್ಟುವವರೆಗೂ ಕಾವು
ಹೋರಾಡಿ ಶ್ರಮದ ಗೆಲುವಿಗೆ|
ಅನ್ಯಾಯ ದೌರ್ಜನ್ಯಗಳ ತಡೆಗೆ
ನಿಲ್ಲಿ ನೇಗಿಲ ಯೋಗಿಯ ನೆರವಿಗೆ…

ಒಪ್ಪತ್ತು ಗಂಜಿಗೆ ದಿನವಿಡೀ ದುಡಿದು
ಬೆವರಲ್ಲಿ ಮೈ ಬಸಿಯುತ್ತಿರುವನು|
ಕೇಳುವವರಿಲ್ಲದೆ ಇವನ ಪಾಡು
ಹಾಡುಹಗಲೇ ಕುಸಿದು ಕುಳಿತಾನು||
ಕೀಟನಾಶಕ ರಸಗೊಬ್ಬರ
ವಿದ್ಯುತ್ ನೀರು ದುಬಾರಿ ಪರಿಕರ|
ಭರವಸೆ ನೀಡಿದ ಸರಕಾರ
ಸಹಾಯಧನ ಕಡಿತಗೊಳಿಸಿ ಹರೋಹರ||
ಕಷ್ಟ ನಷ್ಟಗಳ ಆಗರ
ಜೀವನವೇ ಇಲ್ಲಿ ಅತಿ ಭಾರ|
ಪ್ರತಿಭಟಿಸಿ ಸಿಡಿದೆದ್ದು ನಿಂತರೆ ರೈತ
ನಾಡಿಗೆ ನಾಡೇ ಹಾಹಾಕಾರ…

ಅತಿವೃಷ್ಟಿ ಅನಾವೃಷ್ಟಿ|
ಬಡತನವೇ ಇಲ್ಲಿ ಪಿತ್ರಾರ್ಜಿತ ಆಸ್ತಿ ||
ಅಸ್ಥಿರ ಮಾರುಕಟ್ಟೆಯ ವಸತಿ
ವೈಜ್ಞಾನಿಕ ಸಂಸ್ಕರಣೆಯು ನಾಸ್ತಿ||
ಖರ್ಚು ವೆಚ್ಚವಾಗಿ ಅಗಣಿತ
ಬೆಂಬಲ ಬೆಲೆಯಿಲ್ಲದೆ ಅತ್ತಿತ್ತ|
ಮಧ್ಯವರ್ತಿಯ ಹಾವಳಿ ವಿಪರೀತ
ರಾಜಕೀಯ ಇಚ್ಛಾಶಕ್ತಿಗಿದೆ ಕೊರೆತ||
ಬರಗಾಲದ ಬರೆ
ತಾಳದ ಭಾದೆ ಸಾಲದ ಮೊರೆ|
ದೀರ್ಘಕಾಲ ಕಿರುಕುಳದ ಹೊರೆ
ಕೃಷಿ ಪ್ರಗತಿಗೆ ಓಗೊಡಲಿ ಈ ಕರೆ….

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter