ಉಡುಪಿ; ಕೊಡಂಕೂರು ಬಯಲು ಪ್ರದೇಶದಲ್ಲಿ ಜೋಪಡಿ ಕಟ್ಟಿಕೊಂಡು, ಬದುಕು ಸಾಗಿಸುತ್ತಿದ್ದ ಅಲೆಮಾರಿ ಜನಾಂಗದ ಗರ್ಭಿಣಿ ಮಹಿಳೆಯೊರ್ವಳು, ಪ್ರಸವ ವೇದನೆಯಿಂದ ಅಸಹಾಯಕಳಾಗಿ ನರಳುತ್ತಿರುವಾಗ, ಸಮಾಜಸೇವಕ ವಿಶು ಶೆಟ್ಟಿ ಅವರು ನೆರವಿಗೆ ಬಂದು ಮೂಲ ಸೌಕರ್ಯ ಒದಗಿಸಿ ಮಾನವಿಯತೆ ಮರೆದ ಘಟನೆ ಶನಿವಾರ ನಡೆದಿದೆ.

IMG-20190615-WA0075

IMG-20190615-WA0117 (1)

ವಿಷಯ ತಿಳಿದ ವಿಶು ಶೆಟ್ಟಿ ಅವರು 108 ಅಂಬುಲೇನ್ಸಿಗೆ ಕರೆಮಾಡಿದ್ದಾರೆ. ಶುಶ್ರೂಕ ಸಿಬ್ಬಂಧಿಗಳು ಸ್ಥಳಕ್ಕೆ ಬರುವ ಮೊದಲೇ ಜೋಪಡಿಯಲ್ಲಿ ಗರ್ಭಿಣಿ ಮಹಿಳೆ ಗಂಡು ಮಗುವಿಗೆ ಜನ್ಮವೆತ್ತಿದ್ದಾಳೆ. ನಂತರ ಸಿಬ್ಭಂದಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ ಸರಕಾರಿ ಹೆರಿಗೆ ಆಸ್ಪತ್ರೆಗೆ ದಾಖಲು ಪಡಿಸಿದ್ದಾರೆ. ಗರ್ಭಿಣಿ ಮಹಿಳೆಯನ್ನು ಶಿರಸಿ ಮೂಲದ ಜಲಕ್ಕ (24 ವ)ಎಂದು ತಿಳಿದು ಬಂದಿದೆ. ಪ್ರಸವದ ದಿನಗಳು ಹತ್ತಿರ ಇರುವಾಗ ಪತಿ ಕೃಷ್ಣ ಊರಿಗೆ ತೆರಳಿದ್ದು, ಮಹಿಳೆಗೆ ಅಸಹಾಯಕತೆ  ಎದುರಾಯಿತೆಂದು ತಿಳಿದು ಬಂದಿದೆ.

By suddi9

Leave a Reply

Your email address will not be published. Required fields are marked *