ಬಂಟ್ವಾಳ,:  ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿಹೊಂದಲು ಸರಕಾರವು ಇಸ್ರೇಲ್ ಮಾದರಿಯ ಕೃಷಿ ಯೋಜನೆಯನ್ನು ರೂಪಿಸಿದ್ದರೂ,ಈ ಯೋಜನೆಗೆ ದ.ಕ. ಹಾಗೂ ಉಡುಪಿ ಜಿಲ್ಲೆಗಳನ್ನು ಕೈಬಿಟ್ಟಿರುವುದು ಮಾತ್ರ ಖೇದಕರ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಸಮಾಧಾನ    ಕ್ತಪಡಿಸಿದ್ದಾರೆ.
ಅವರು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ “ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ” ಮೂರು ದಿನಗಳ ಕಾಲ ನಡೆಯುವ ಬಂಟ್ವಾಳ ತಾಲೂಕು ಮಟ್ಟದ ಕೃಷಿ ಅಭಿಯಾನ ೨೦೧೯-೨೦ಕ್ಕೆ ಸೋಮವಾರ ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

IMG_3896
ಬಳಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅಭಿಯಾನದಲ್ಲಿ ನೆರೆದ ಕೃಷಿಕರಿಗೆ ಕೃಷಿ ಪಾಠ ಮಾಡಿ,    ಈ ಅವಳಿ ಜಿಲ್ಲೆಗಳಲ್ಲಿ ಸಣ್ಣ, ಸಣ್ಣ ಭೂ ಹಿಡುವಳಿದಾರರಿದ್ದು, ಇಸ್ರೇಲ್ ಮಾದರಿಯ ಕೃಷಿ ತಂತ್ರಜ್ಞಾನಕ್ಕೆ ಸೂಕ್ತವಾದ ಕೃಷಿ ಪ್ರದೇಶವಾಗಿದೆ. ಈ ಯೋಜನೆಯನ್ನು ತಮ್ಮ ಜಿಲ್ಲೆಗಳಿಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಸೇರಿಸುವ ಭರವಸೆ ನೀಡಿದ್ದಾರೆ ಎಂದವರು ಹೇಳಿದರು.
ಆಧುನಿಕ ಯುಗದಲ್ಲಿ ನಶಿಸಿ ಹೋಗುತ್ತಿರುವ ಭತ್ತ ಬೆಳೆಯನ್ನು ಯಾಂತ್ರೀಕೃತ ಬಳಸಿಕೊಂಡು ಕೃಷಿಯನ್ನು ಲಾಭದಾಯಕವಾಗಿ ಮಾಡಬಹುದು. ಭತ್ತದ ಬೆಳೆ ಲಾಭದಾಯಕವಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಇದಕ್ಕೆ ಕಾರ್ಮಿಕರ ಕೊರತೆಯೊಂದು ಕಾರಣವೊಂದು ಬಿಟ್ಟರೆ ಮುಂದುವರಿದ ಯಾಂತ್ರೀಕರಣವನ್ನು ಬಳಸಿ ಭತ್ತದ ಬೆಳೆಯನ್ನು ಲಾಭಯಾದಕವನ್ನಾಗಿ ಮಾಡಬಹುದು ಎಂದು ಸಲಹೆ ನೀಡಿದರು.

IMG_3891
ಕೃಷಿಕರು ತಾವು ಮಾಡಿದ ಕೆಲಸವನ್ನು ಪ್ರೀತಿಸಬೇಕು. ತಾನೊಬ್ಬ ಕೃಷಿಕ ಎಂಬ ಹೆಮ್ಮೆಯಿಂದ ಕೆಲಸ ಮಾಡಿದಾಗ ಅಭಿವೃದ್ಧಿ ಸಾಧ್ಯ. ತಮ್ಮ ಕೆಲಸದ ಬಗ್ಗೆ ಯಾವುದೇ ಕೀಳರಿಮೆ ಬೇಡ ಎಂದ ಅವರು, ಸ್ವಾವಲಂಭನೆಯ ದೃಢ ನಿರ್ಧಾರ, ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಿದಾಗ ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಸಾಧ್ಯ ಎಂದರು.
ಬೇಸಾಯ ಆರಂಭದ ನಾಲ್ಕೈದು ದಿನ ಕೆಲಸ ಮಾಡಿದರೆ ಸಾಲದು. ಬೆಳೆ ಫಸಲು ಬರುವವರೆಗೂ ಅದನ್ನು ನೋಡಿಕೊಳ್ಳುವ ತಾಳ್ಮೆ ನಮ್ಮಲ್ಲಿರಬೇಕು. ಇಲ್ಲದಿದ್ದರೆ, ಸರಕಾರ ಎಷ್ಟೇ ಯೋಜನೆಗಳನ್ನು ಜಾರಿಗೊಳಿಸಿದರೂ ಕೃಷಿ ಅಭಿವೃದ್ಧಿ ಅಸಾಧ್ಯ ಎಂದರು.
ಸರಕಾರ ರೈತರಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದರೂ, ಮಾಹಿತಿ ಕೊರತೆಯಿಂದ ಅರ್ಹ ರೈತರಿಗೆ ಸರಿಯಾದ ಸಮಯಕ್ಕೆ ತಲುಪುತ್ತಿಲ್ಲ. ಇದಕ್ಕಾಗಿ ಇಲಾಖೆಯು ಪ್ರತೀ ಗ್ರಾಮ ಮಟ್ಟದಲ್ಲಿ ಕೃಷಿಕರ ಸಭೆ ನಡೆಸಬೇಕು ಜೊತೆಗೆ ಹೊಸ ಮಾದರಿಯ ಯಾಂತ್ರೀಕೃತ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕತೆಯ ಮೂಲಕ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಕೃಷಿಕರನ್ನು ಮಾನಸಿಕವಾಗಿ ಬಲಾಢ್ಯಗೊಳಿಸಲು ಇಲಾಖೆಗಳು ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕು ಎಂದು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ನಾವಿದ್ದು, ಇದೀಗ ಎಲ್ಲ ಕಾರ್ಯಗಳು ಆನ್ ಲೈನ್   ಮೂಲಕ ನಡೆಯುತ್ತಿವೆ. ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಸ್ಥೆಯು ಕೂಡಾ ಆನ್‌ಲೈನ್ ಮೂಲಕ ನಡೆಯುತ್ತಿವೆ. ದಲ್ಲಾಳಿಗಳ ಹಾವಳಿಗಳನ್ನು ತಪ್ಪಿಸಲು ರೈತರೇ ಸೇರಿಕೊಂಡು ಆನ್‌ಲೈನ್ ವ್ಯವಸ್ಥೆಯನ್ನು ಕಾರ್ಯಗತಗೊಳಿಸಿರುವುದು ಕೃಷಿ ಮಾರುಕಟ್ಟೆಯಲ್ಲಾಗಿರುವ ಮಹತ್ತರ ಬದಲಾವಣೆ. ಮುಂದಿನ ದಿನಗಳಲ್ಲಿ ರೈತರೇ ಬೆಲೆ ನಿಗದಿಪಡಿಸಿ ಆನ್‌ಲೈನ್ ಮೂಲಕ ಮಾರಾಟ ಮಾಡುವ ವ್ಯವಸ್ಥೆ ಬರಹುದು ಎಂದು ತಿಳಿಸಿದರು.
ಈ ವೇಳೆ ತಾಲೂಕಿನ ೧೦ ಮಂದಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಜಿಪಂ ಸದಸ್ಯರಾದ ತುಂಗಪ್ಪ ಬಂಗೇರ, ರವೀಂದ್ರ ಕಂಬಳಿ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಯು.ಪಿ. ಇಬ್ರಾಹಿಂ, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ತಾಪಂ ಇಒ ರಾಜಣ್ಣ, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಬಂಟ್ವಾಳ ಕೃಷಿ ಸಮಾಜದ ಅಧ್ಯಕ್ಷ  ಅಶೋಕ್ ಕುಮಾರ್ ಬರಿಮಾರು,ತಾಪಂ ಸದಸ್ಯ ಪ್ರಭಾಕರ ಪ್ರಭು ಹಾಜರಿದ್ದರು.
ಸಹಾಯಕ ಕೃಷಿ ನಿದೇರ್ಶಕ ನಾರಾಯಣ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿದರು. ಇಲಾಖೆಯ ಸಿಬ್ಬಂದಿ ಪ್ರಿಯಾಂಕಾ ವಂದಿಸಿ, ನಂದನ್ ಕಿಣಿ ನಿರೂಪಿಸಿದರು.

 

By suddi9

Leave a Reply

Your email address will not be published. Required fields are marked *