ಬಂಟ್ವಾಳ:ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ನಿವೃತ್ತ ಶಿಕ್ಷಕ ಸಂಕಪ್ಪ ಶೆಟ್ಟಿ 8980808080 ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಶನಿವಾರ ಸಂಜೆ ಬಂಟ್ವಾಳ ಕ್ಷೇತ್ರ ಬಿಜೆಪಿಯ ಸದಸ್ಯತ್ವಅಭಿಯಾನಕ್ಕೆ ಚಾಲನೆ ನೀಡಿದರು.
ಬಿ.ಸಿ.ರೋಡಿನ ಬಂಟ್ವಾಳ ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜನಸಂಘ ಕಾಲದ ಹಿರಿಯರಾದ ಕೃಷ್ಣ ಶೆಟ್ಟಿ ದಂಡೆ ಅವರನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗೌರವಿಸಿದರು. ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ನಾವೂರ ಈ ಸಂಧರ್ಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ , ರಾಜ್ಯ ಸಹ ವಕ್ತಾರೆಸುಲೋಚನ.ಜಿ.ಕೆ.ಭಟ್, ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ್, ಮೋನಪ್ಪ ದೇವಸ್ಯ, ಸದಸ್ಯತಾ ಅಭಿಯಾನದ ಕ್ಷೇತ್ರ ಸಂಚಾಲಕ ದೇವಪ್ಪಪೂಜಾರಿ, ಸಹ ಸಂಚಾಲಕ ಅಭಿಷೇಕ್ ರೈ, ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂದೇಶ ಶೆಟ್ಟಿ , ಜಿಲ್ಲಾ ಎಸ್ಸ್ ಸಿ ಮೋರ್ಚ ಅಧ್ಯಕ್ಷ ದಿನೇಶ್ ಅಮ್ಟೂರ್, ಜಿ.ಪಂ ಸದಸ್ಯೆ ಕಮಲಾಕ್ಷಿಪೂಜಾರಿ, ತಾಲೂಕು ಪಂಚಾಯತ್ , ಪುರಸಭಾ ಸದಸ್ಯರು ಹಾಗೂ ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.


