ಬಂಟ್ವಾಳ : ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರಸ್ತುತ ಬಿ.ಸಿ.ರೋಡ್ ನಗರ ಸುಂದರೀಕರಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಬಿ.ಸಿ.ರೋಡಿನ ನಾರಾಯಣಗುರು ವೃತ್ತದಿಂದ ಕೈಕಂಬದ ವರೆಗಿನ 15 ಕೋ.ರೂ.ಗಳ ಕಾಮಗಾರಿಗೆ ಆಷಾಢ ಮುಗಿದ ಕೂಡಲೇ ಚಾಲನೆ ನೀಡಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾೈಕ್ ಉಳಿಪ್ಪಾಡಿ ಹೇಳಿದರು. ದ.ಕ.ಸಂಸದ ನಳಿನ್‍ಕುಮಾರ್ ಕಟೀಲು ಅವರ ಸಮ್ಮುಖದಲ್ಲಿ ಶನಿವಾರ ಮಂಗಳೂರಿನಲ್ಲಿ ಬಿ.ಸಿ.ರೋಡ್ ನಗರ ಸುಂದರೀಕರಣದ ಸಮಾಲೋಚನಾ ಸಭೆಯ ಕುರಿತು ಬಂಟ್ವಾಳದ ತಮ್ಮ ಕಚೇರಿಯಲ್ಲಿ ಪತ್ರಕರ್ತರಿಗೆ ಮಾಹಿತಿ ನೀಡಿದರು. IMG-20190706-WA0030
ವಿನ್ಯಾಸಕ ಎಂಜಿನಿಯರ್ ಧರ್ಮರಾಜ್ ಅವರು ಸುಂದರೀಕರಣದ ಕುರಿತು ಯೋಜನೆ ರೂಪಿಸುತ್ತಿದ್ದು, ಬಹುತೇಕ ಕಾಮಗಾರಿಗಳಿಗೆ ಪ್ರಾಯೋಜಕರು ಮುಂದೆ ಬಂದಿದ್ದಾರೆ. ಮಂಗಳೂರಿನ ಸಭೆಯಲ್ಲಿ ಹೆದ್ದಾರಿ ಎಂಜಿನಿಯರ್ ಗಳು ಸಹಿತ ಸಾಕಷ್ಟು ಮಂದಿ ಉಪಸ್ಥಿತರಿದ್ದು, ತಮ್ಮ ಸಲಹೆಗಳನ್ನು ನೀಡಿದ್ದಾರೆ. ಅಂತರಾಷ್ಟ್ರೀಯ ಮಟ್ಟದ ಎರಡು ಶೌಚಾಲಯ, ಗುಣಮಟ್ಟದ ಸಿಸಿ ಕ್ಯಾಮರ ,ವಿದ್ಯುದ್ದೀಪ ಅಳವಡಿಕೆ,ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮುಂಭಾಗ ವೃತ್ತ ನಿರ್ಮಾಣ ಸಹಿತ ಹಲವು ಅಭಿವೃದ್ದಿ ಕೆಲಸಗಳು ಈ ಸುಂದರೀಕರಣ ಯೋಜನೆಯ ನೀಲನಕಾಶೆಯಲ್ಲಿ ಸೇರಿದೆ ಎಂದರು.IMG-20190706-WA0032
ಗಣ್ಯರ ಸಮಿತಿ ರಚನೆ:
ಬಿ.ಸಿ.ರೋಡು ಸುಂದರೀಕರಣದ ಜತೆಗೆ ಬಂಟ್ವಾಳ ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮುಂದೆ ಬಂಟ್ವಾಳದ ಗಣ್ಯರ ಸಮಿತಿಯೊಂದನ್ನು ರಚಿಸಿಕೊಂಡು ಅವರ ಸಲಹೆ ಪಡೆಯುವ ಯೋಚನೆಯೂ ಇದೆ. ಮುಂದಿನ ದಿನಗಳಲ್ಲಿ ಸಮಿತಿಯ ಹೆಸರನ್ನು ಪ್ರಕಟಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್, ಬಿ.ದೇವದಾಸ್ ಶೆಟ್ಟಿ, ದೇವಪ್ಪ ಕರ್ಕೇರ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *