ಬಂಟ್ವಾಳ ತಾಲ್ಲೂಕಿನ ನೆಡ್ಯಾರು ಎಂಬಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೂ.3 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಟೀಕೃತ ರಸ್ತೆ ಕಾಮಗಾರಿಯನ್ನು ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸೋಮವಾರ ಉದ್ಫಾಟಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯೆ ಗೀತಾ ಚಂದ್ರಶೇಖರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸನತ್ ಕುಮಾರ್ ರೈ, ಉಪಾಧ್ಯಕ್ಷೆ ಕವಿತ ಉಮೇಶ್ ಪೂಜಾರಿ, ಬಿಜೆಪಿ ಗ್ರಾಮ ಸಮಿತಿ ಆದ್ಯಕ್ಷ ಚಂದ್ರಶೇಖರ್ ಕರ್ಕೇರ, ಜಿಲ್ಲಾ ಪಂಚಾಯಿತಿ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ಮಾಜಿ ಸದಸ್ಯ ಚೆನ್ನಪ್ಪ ಕೋಟ್ಯಾನ್, ತನಿಯಪ್ಪ ಗೌಡ, ಅಭಿಷೇಕ್ ರೈ, ಮೋಹನ್ ಪಿ.ಎಸ್. ಮತ್ತಿತರರು ಇದ್ದರು.
