ಕೈಕಂಬ:ಬಿಸಿರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಅಡ್ಡೂರಿನ ಉಸ್ತಾದ್ ಅವರು ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಹಿರಿಯ ಧಾರ್ಮಿಕ ವಿದ್ವಾಂಸ ಅಡ್ಡೂರಿನ ಉಸ್ತಾದ್ಯೂಸ್ಪ್ ಹಾಜಿ ಮೃತಪಟ್ಟವರು.
ಇವರು ರಸ್ತೆ ದಾಟುತ್ತಿದ್ದಾಗ ಕೈಕಂಬದ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ ಗಂಭೀರವಾಗಿ ಗಾಯಗೊಂಡ ಇವರನ್ನು ತಕ್ಷಣ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರುಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.
