ಬಂಟ್ವಾಳ: ಬಿಜೆಪಿ ಕರೋಪಾಡಿ ಗ್ರಾಮ ಸಮಿತಿ ವತಿಯಿಂದ ನಡೆದ ಸದಸ್ಯತ್ವ ಅಭಿಯಾನಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚೆಂಬರ್ಪು ಕರಿಯಪ್ಪ ಮೂಲ್ಯರ ಮನೆಯ ಮುಂಭಾಗದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎಸ್ ಸಿ ಮೋರ್ಚಾದ ಶ್ರೀ ದಿನೇಶ್ ಅಮ್ಟೂರು,ಬಿಜೆಪಿ ಕೊಳ್ನಾಡು ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಶ್ರೀ ಹರೀಶ ಬೇಡಗುಡ್ಡೆ,ಕನ್ಯಾನ ಗ್ರಾಮ ಸಮಿತಿ ಅಧ್ಯಕ್ಷರಾದ ರಘುರಾಮ ಶೆಟ್ಟಿ ಕನ್ಯಾನ,ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ,ಪಂಚಾಯತ್ ಸದಸ್ಯರಾದ ಅಶ್ವಥ್ ಶೆಟ್ಟಿ ಅನೆಯಾಲ,ಕರೋಪಾಡಿ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ಅಧ್ಯಕ್ಷರಾದ ವಿಘ್ನೇಶ್ವರ ಭಟ್ ಅನೆಯಾಲಕೋಡಿ,ಉಪಾಧ್ಯಕ್ಷರಾದ ರಘುನಾಥ್ ಶೆಟ್ಟಿ ಪಟ್ಲ,ಹಿಂಜಾವೇ ಕರೋಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಶ್ರೀ ವಿನೋದ್ ಶೆಟ್ಟಿ ಪಟ್ಲ ಉಪಸ್ಥಿತರಿದ್ದರು.
