ಬಂಟ್ವಾಳ: ಟೀಮ್ ವೀರಾಂಜನೇಯ ಫರಂಗಿಪೇಟೆ ತಂಡದ ಆಶ್ರಯದಲ್ಲಿ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಸಮೀಪ ತುಪ್ಪೆಕಲ್ಲು ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಅರ್ಕುಳ ಬೀಡು ಧರ್ಮದರ್ಶಿ ವಜ್ರನಾಭ ಶೆಟ್ಟಿ ಸಸಿ ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಲಾಯಿತು. 
ಅರ್ಕುಳ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ರತ್ನರಾಜ್ ಶೆಟ್ಟಿ, ಪ್ರಾಧ್ಯಾಪಕ ಡಾ. ಜಯಕುಮಾರ್ ಶೆಟ್ಟಿ , ಕಂಪ ಸದಾನಂದ ಅಳ್ವ,ಪರಿಸರ ಪ್ರೇಮಿ ಮಾಧವ ಉಲ್ಲಾಳ್, ಕೃಷಿಕ ಅಜಿತ್ ಕುಮಾರ್ ಶೆಟ್ಟಿ ,ಗ್ರಾಮಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ತುಪ್ಪೆಕಲ್ಲು, ಸೇಸಪ್ಪ ಕರ್ಕೇರ ಧರ್ಮಗಿರಿ,ದಿನಕರ ಕರ್ಕೇರ ಮಂಟಮೆ ,ಕೃಷಿಕ ಉಮೇಶ್ ಸೇಮಿತ ಹಾಗೂಅರ್ಕುಳ ಚಾರಿಟೇಬಲ್ ಟ್ರಸ್ಟ್ ಪ್ರವರ್ತಿತ ಸ್ವಸಹಾಯಗುಂಪುಗಳ ಪದಾಧಿಕಾರಿಗಳು ಮೊದಲಾದವರಿದ್ದರು.ಈ ಸಂದರ್ಭದಲ್ಲಿ ಆರ್ಕುಳ, ತುಪ್ಪೆಕಲ್ಲು ಹಾಗೂ ಫರಂಗಿಪೇಟೆ ಪರಿಸರದ ನಾಗರಿಕರಿಗೆ ವಿವಿಧ ಜಾತಿಯ ಸಸಿಗಳನ್ನು ವಿತರಿಸಲಾಯಿತು. 

