ವಿಟ್ಲ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ ಕಲ್ಪನೆಯಡಿಯಲ್ಲಿ ಪ್ಲಾಸ್ಟಿಕ್ ನಿಷೇಧ ಜನಜಾಗೃತಿ ಆಂದೋಲನ ಕಾರ್ಯಕ್ರಮದ ಅಂಗವಾಗಿ ವಿಟ್ಲ ನಗರ ಬಿಜೆಪಿ ವತಿಯಿಂದ ವಿಟ್ಲದ ಸಂತೆ ಮಾರುಕಟ್ಟೆಯಲ್ಲಿ ಜನರಿಗೆ ಬಟ್ಟೆ ಚೀಲ ವಿತರಣೆ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ್ ಉಕ್ಕುಡ, ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಪಟ್ಟಣ ಪಂಚಾಯತ್ ಸದಸ್ಯರುಗಳಾದ ಅರುಣ್ ಎಂ ವಿಟ್ಲ, ವಿ ರಾಮದಾಸ ಶೆಣೈ, ಚಂದ್ರಕಾಂತಿ ಶೆಟ್ಟಿ ಮತ್ತು ಮಂಜುನಾಥ ಕಲ್ಲಕಟ್ಟ ಪ್ರಮುಖರಾದ ಗೋವರ್ಧನ ಕುಮಾರ್ ಇಡ್ಯಾಳ, ನಾಗೇಶ್ ಬಸವನಗುಡಿ, ಶಶಿಕಾಂತ್, ಅನಂತಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

