ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ 2018-19ನೇ ಸಾಲಿನ ವಾರ್ಷಿಕ ಮಹಾಸಭೆ ಶನಿವಾರ ಬೆಳಿಗ್ಗೆ ಶಂಭೂರಿನ ಕೇಂದ್ರ ಕಚೇರಿಯ ಆವರಣದಲ್ಲಿ ನಡೆಯಿತು. ಸಂಘದ ಹಿರಿಯ ಮೂರ್ತೆದಾರ ಸದಸ್ಯರಾದ ಚಂದು ಪೂಜಾರಿ ಕೇದಿಗೆ, ಈಶ್ವರ ಪೂಜಾರಿ ನಾಟಿ, ಈಶ್ವರ ಪೂಜಾರಿ ನೀರಪಾದೆ, ಲೋಕಯ್ಯ ಪೂಜಾರಿ ಕುಂದಾಯಗೋಳಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು.

BTW_SEP24_5
ಉಪಾಧ್ಯಕ್ಷ ಮಾಧವ ಕೆ.ಕರ್ಬೇಟ್ಟು, ನಿರ್ದೇಶಕರುಗಳಾದ ರಾಜೇಶ್ ಶೇಡಿಗುರಿ, ಮೋನಪ್ಪ ಪೂಜಾರಿ ಬೊಂಡಾಲ, ನಾರಾಯಣ ಪೂಜಾರಿ ಕೇದಿಗೆ, ಅಶೋಕ ಆರ್., ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಉಪಸ್ಥಿತರಿದ್ದರು. ಕಾರ್ಯದರ್ಶಿ ಯೋಗೀಶ್ ಅಮೀನ್ ಸ್ವಾಗತಿಸಿ, ವರದಿ ಮಂಡಿಸಿದರು. ಉಪಾಧ್ಯಕ್ಷ ಮಾಧವ ಕರ್ಬೇಟ್ಟುವಂದಿಸಿದರು.

By suddi9

Leave a Reply

Your email address will not be published. Required fields are marked *