ಕೋಲಾರ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ ನೀಡುವುದಾಗಿ ಜಿಲ್ಲಾ ಪಂಚಾಯಿತಿ ನೂತನ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ .ವಿ. ದರ್ಶನ್ ತಿಳಿಸಿದರು ಅಧಿಕಾರ ವಹಿಸಿಕೊಂಡ ನಂತರ ತಮ್ಮನ್ನು ಭೇಟಿ ಮಾಡಿದ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿಯೋಗದೊಂದಿಗೆ ಅವರು ಮಾತನಾಡುತ್ತಿದ್ದರು ಸರ್ಕಾರಿ ನೌಕರರು ತಮ್ಮ ಇತಿ ಮಿತಿಯಲ್ಲಿ ಸಾರ್ವಜನಿಕರ ಸೇವೆ ಮಾಡುವಂತೆ ಅವರು ತಿಳಿಸಿದರು.
ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಬಿ.ಅಶೋಕ್ ನೇತೃತ್ವದ ನಿಯೋಗದಲ್ಲಿ ಗೌರವಾಧ್ಯಕ್ಷ ಆರ್.ಅನಿಲ್ ಕುಮಾರ್, ಕಾರ್ಯದರ್ಶಿ ಮುರಳಿ ಮೋಹನ್ . ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್ .ನಾಗರಾಜ ಗೌಡ, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಜಿ.ಪಂ.ನ ಆನಂದ. ಮಾಲೂರು ಶಿಕ್ಷಕರ ಸಂಘದ ಕಾರ್ಯದರ್ಶಿ ನಾರಾಯಣಸ್ವಾಮಿ, ಶ್ರೀನಿವಾಸಪುರದ ಅಧ್ಯಕ್ಷ
ಗವಾದಿ ನಾಗರಾಜ್, ಶಿಕ್ಷಕರ ಸಂಘದ ಕೆ.ಹೆಚ್ ಸಂಪತ್ತುಕುಮಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀರಾಮ್, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು
