ಬಂಟ್ವಾಳ: ಇಲಾಖೆಗೆ ನೀಡಲಾದ ಮಾಸಿಕ ಗುರಿಗಳನ್ನು ನಿಗದಿತ ಸಮಯದೊಳಗೆ ತಲುಪುವಂತೆ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ಸೂಚಿಸಿದ್ದಾರೆ. ಗುರುವಾರ ತಾಪಂ ನ ಎಸ್ ಜಿಎಸ್ ವೈ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪಾಧ್ಯಕ್ಷ ಅಬ್ಬಾಸ್ ಆಲಿ ಮಾತನಾಡಿ ಜನರಿಗೆ ಅಗತ್ಯವಿರುವ ಹೊಸ,ಹೊಸ ಕಾರ್ಯಕ್ರಮಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಎಲ್ಲಾ ಇಲಾಖಾ ಅಧಿಕಾರಿಗಳು ತಮ್ಮ ಇಲಾಖಾವಾರು ಮಾಹಿತಿ ನೀಡಿದರು.ತಾ.ಪಂ.ಮುಖ್ಯಕಾರ್ಯನಿರ್ವಣಾಧಿಕಾರಿ ರಾಜಣ್ಣ ಸ್ವಾಗತಿಸಿ ವಂದಿಸಿದರು.