ಬಂಟ್ವಾಳ ಅಧ್ಯಯನ ಕೇಂದ್ರ, ವಸ್ತುಸಂಗ್ರಹಾಲಯದ ರಜತ ವರ್ಷಾಚರಣೆ ಹಿನ್ನೆಲೆಯಲ್ಲಿ  ಶನಿವಾರ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದಲ್ಲಿ ಮೌಖಿಕ ಇತಿಹಾಸ ದಾಖಲೀಕರಣ ಕಾರ್ಯಾಗಾರ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರದ ಅಧ್ಯಕ್ಷ ಪ್ರೊ. ತುಕಾರಾಮ ಪೂಜಾರಿ, ಇತಿಹಾಸ ಎಂಬುದು ಅರ್ಧ ಸತ್ಯ. ಇದರಲ್ಲಿ ಸತ್ಯದ ಹುಡುಕಾಟ ನಡೆಯಬೇಕು. ಮೌಖಿಕ ಇತಿಹಾಸದ ದಾಖಲೀಕರಣ ಸಂದರ್ಭ ಸತ್ಯಾನ್ವೇಷಣೆಯೂ ನಡೆಯುತ್ತದೆ ಎಂದರು.

12bhitihasa ಮಂಗಳೂರಿನ ದೈಜಿವರ್ಲ್ಡ್ ವ್ಯವಸ್ಥಾಪಕ  ಪ್ರವೀಣ್ ತಾವ್ರೋ ಕಾರ್ಯಕ್ರಮ ಉದ್ಘಾಟಿಸಿ  ಮಾತನಾಡಿ, ಜನಸಾಮಾನ್ಯರ ಪರಿಕಲ್ಪನೆಯಡಿ ಇತಿಹಾಸ ದರ್ಶನ ನಡೆಸುವ ಕಾರ್ಯ ಶ್ಲಾಘನೀಯ ಎಂದರು.      ಮಡಿಕೇರಿ ಭೂಮಾಪನ ಅಳತೆ ವಿಭಾಗದ ಅಧಿಕಾರಿ ಗಜೇಂದ್ರ ಮಾತನಾಡಿ, ಪ್ರವಾಸೋದ್ಯಮ ಹಿನ್ನೆಲೆಯಲ್ಲಿ, ತುಳುನಾಡಿನ ಇತಿಹಾಸ ಪರಂಪರೆ ಅರಿವು ಮೂಡಿಸುವ ಕಾರ್ಯ ಹಿನ್ನಡೆಯಾಗುತ್ತಿದೆ. ಮಕ್ಕಳಿಗೆ, ಜನರಿಗೆ ತಲುಪಿಸುವ ಕಾರ್ಯ ನಡೆಯಬೇಕು. ಇಂಥ ಜಾಗಗಳ ಪರಿಚಯ ಮಾಡಬೇಕು, ಪ್ರವಾಸೋದ್ಯಮ ಹಿನ್ನೆಲೆಯಲ್ಲಿ ಇದನ್ನು ಅಭಿವೃದ್ಧಿ ಪಡಿಸಬೇಕು ಎಂದರು.

 ಯುಎಇ ಕನ್ನಡ ಸಂಸ್ಕೃತಿ ರಾಯಭಾರಿ ಸರ್ವೋತ್ತಮ ಶೆಟ್ಟಿ, ಉಡುಪಿ ಜಿಲ್ಲೆಯ ಇತಿಹಾಸ ಉಪನ್ಯಾಸ ಸಂಘದ ಕಾರ್ಯದರ್ಶಿ ಮರಿಯಾ ಜಸಿಂತಾ ಫುರ್ಟಾಡೋ, ದ.ಕ.ಜಿಲ್ಲಾ ಇತಿಹಾಸ ಉಪನ್ಯಾಸ ಸಂಘದ ಕಾರ್ಯದರ್ಶಿ ಪ್ರೊ.ಸಂತೋಷ್, ಕಾಸರಗೋಡು ಇತಿಹಾಸ ಉಪನ್ಯಾಸಕ ವೇದಿಕೆ ಸಂಚಾಲಕ ಪ್ರೊ.ರಾಜೇಂದ್ರ ರೈ, ಕೇಂದ್ರದ ಪ್ರೊ.ಆಶಾಲತಾ ಸುವರ್ಣ ಉಪಸ್ಥಿತರಿದ್ದರು. ವಗ್ಗ ಸರಕಾರಿ ಕಾಲೇಜು ಪ್ರಭಾರ ಪ್ರಾಂಶುಪಾಲ ಪ್ರೊ. ವಿಲ್ಫ್ರೆಡ್ ಪ್ರಕಾಶ್  ಡಿಸೋಜ ಸ್ವಾಗತಿಸಿದರು. ಸಚೇತ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಶರತ್ ಆಳ್ವ ಪ್ರಾರ್ಥಿಸಿದರು.

By Suddi9

Leave a Reply

Your email address will not be published. Required fields are marked *