ಮಂಗಳೂರು : ಮಂಗಳೂರು ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮಸೀದಿಯ ಆವರಣ ಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ 10ನೇ ಮೈಲುಕಲ್ಲು ಎಂಬಲ್ಲಿ ಮಂಗಳವಾರ ನಡೆದಿದೆ.
ಹತ್ತನೇ ಮೈಲುಕಲ್ಲು ನಿವಾಸಿ ಇಸ್ಮಾಯೀಲ್, ಸುಲೈಮಾನ್ ಎಂಬವರು ಗಾಯಗೊಂಡವರೆಂದು ತಿಳಿದುಬಂದಿದ್ದು, ಕಾರಿನಲ್ಲಿದ್ದ ಮೂವರ ಪ್ರಯಾಣಿಕರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

