ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ೨೦೧೭-೧೮ ಸಾಲಿನ ಸ್ವಚ್ಚ ಭಾರತ್ ಮಿಷನ್ ಯಡಿಯಲ್ಲಿ ಸುಮಾರು ೧೪ ಲಕ್ಷ ವೆಚ್ಚಚದಲ್ಲಿ ಅನುಷ್ಠಾನಗೊಂಡ ಮಾಣಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷರ ನೇತೃತ್ವದ ಜನಪ್ರತಿನಿಧಿಗಳ ನಿಯೋಗ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ತ್ಯಾಜ್ಯ ಘಟಕದ ಕಾಮಗಾರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ, ಮಾಜಿ ಸಚಿವರಾದ ಬಿ.ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜುಳ ಮಾವೆ, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಮ್.ಎಸ್ ಮಹಮ್ಮದ್, ಎ.ಪಿ.ಎಮ್.ಸಿ ಅಧ್ಯಕ್ಷ ಪದ್ಮನಾಭ ರೈ, ತಾಲೂಕು ಪಂಚಾಯತ್ ಸದಸ್ಯೆ ಮಂಜುಳ ಕುಶಲ, ಮಾಣಿ ಗ್ರಾಮ ಪಂಚಾಯತ್ ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಬೇಬಿ ಕುಂದರ್, ಶ್ರೀಧರ್ ರೈ. ಕುಶಲ.ಎಮ್, ವಿಕೇಶ್ ಶೆಟ್ಟಿ ಮತ್ತಿತರರಿದ್ದರು.
