ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಜ. 22 ರಿಂದ ಮೊದಲ್ಗೊಂಡು ನಡೆಯುವ ನಾಗಮಂಡಲ, ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಸ್ವಾಗತ ಬಯಸುವ, ದಿವ್ಯರೂಪ ಕನ್ಸ್ಟ್ರಕ್ಷನ್ ಹಾಗು ಇನ್ಫ್ರಾಕಾನ್ ಪ್ರೈ ಲಿ. ಸಂಸ್ಥೆಯ ವತಿಯಿಂದ ನಿರ್ಮಿಸಲಾದ ಸ್ವಾಗತ ದ್ವಾರ ವನ್ನು ಕಟೀಲು ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಉದ್ಘಾಟಿಸಿದರು,
ದಿವ್ಯರೂಪ ಕನ್ಸ್ಟ್ರಕ್ಷನ್ ಹಾಗು ಇನ್ಫ್ರಾಕಾನ್ ನ ಮಾಲಕರಾದ ಯಾದವ ಕೋಟ್ಯಾನ್ ಪೆರ್ಮುದೆ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ರಾಘವೇಂದ್ರ ಆಚಾರ್, ಡಾ|ಜಯರಾಮ್ ಶೆಟ್ಟಿ, ಶೇಖರ್ ಶೆಟ್ಟಿ ಕಲ್ಪವೃಕ್ಷ, ಮತ್ತು ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
