ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾಲಯದಎಲ್ಲಾ ವಿದ್ಯಾರ್ಥಿಗಳು ಒಟ್ಟಾಗಿ ಮೈದಾನದಲ್ಲಿ ಸೇರಿರಥಸಪ್ತಮಿ ನಿಮಿತ್ತ ಸಾಮೂಹಿಕ ಸೂರ್ಯನಮಸ್ಕಾರ ಮಾಡಿದರು. ಯೋಗ ಶಿಕ್ಷಕರಾದ ಸಂಜಯ್ ವಿದ್ಯಾರ್ಥಿಗಳಿಗೆ ಮಂತ್ರಸಹಿತ ಸೂರ್ಯನಮಸ್ಕಾರ ಮಾಡಿಸಿದರು.
ಆವಿಷ್ಕಾರ್ಯೋಗತರಬೇತುದಾರರಾದ ವಿಶಿತ್ ವಿ ದೇರಳಕಟ್ಟೆ ಇವರುರಥಸಪ್ತಮಿ ದಿನದ ಮಹತ್ವವನ್ನು ತಿಳಿಸಿಕೊಟ್ಟರು. ವೇದಿಕೆಯಲ್ಲಿ ಕಬಕ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ಪ್ರೇಮಲತಾ, ಹಿರಿಯರಾದಡಾ| ಕಮಲಾ ಪ್ರಭಾಕರ ಭಟ್, ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ಎನ್, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು. ಶಾರೀರಿಕ ನಿದೇಶಕರಾದಕರುಣಾಕರ ಸ್ವಾಗತಿಸಿ, ಜಿನ್ನಪ್ಪ ಏಳ್ತಿಮಾರ್ ವಂದಿಸಿದರು.




