ಮಂಗಳೂರು: ಕೊರೊನಾ ವೈರಾಸ್ ಕೋವಿದ್ 19 ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇವತ್ತಿಗೆ ಎಳು ದಿನ ಲಾಕ್ ಡೌನ್ ಆಗಿದ್ದು . ಎರಡು ದಿನಗಳಿಂದ ದ.ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದ್ದು ನಾಳೆಯು ಮಾ.30ರಂದು ಸೋಮವಾರವು ಸಂಪೂರ್ಣ ಬಂದ್ ಮಾಡಲು ಜಿಲ್ಲಾ ಉಸ್ತುವರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭಾನುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದ್ದಾರೆ .
ಕೊರೊನಾ ಹರಡದಂತೆ ಕಠಿಣ ಕ್ರಮಕೈಗೊಳ್ಳೂವುದು ಅನಿವಾರ್ಯವಾಗಿದ್ದು ಬಂದ್ ಮುಂದುವರಿಯಲಿದೆ. ಮಾ. 31ರಂದ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿಗಳನ್ನು ಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಸದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್, ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಇದ್ದರು.
