ಬಂಟ್ವಾಳ: ಕರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ ಡೌನ್ ಪಾಲನೆ ಸಂದರ್ಭ ಬಡವರು ಹಸಿವಿನಿಂದ ಸಾಯುವ ಪರಿಸ್ಥಿತಿ ನಿರ್ಮಾಣವಾಗಬಾರದು. ಕೇರಳ ಮಾದರಿಯಂತೆ ಅಂಗನವಾಡಿ ಮೂಲಕ ಬಡವರಿಗೆ ಉಚಿತವಾಗಿ ನಿತ್ಯ ಪಡಿತರ ವಿತರಿಸುವಂತೆ ದ.ಕ.ಜಿಲ್ಲೆಯಲ್ಲೂ ಕ್ರಮ ಕೈಗೊಳ್ಳುವ ತುರ್ತು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳವಾರ ಬಿ.ಸಿ.ರೋಡಿನಲ್ಲಿ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೊರೊನಾ ಜಾಗತಿಕವಾಗಿ ವ್ಯಾಪಿಸಿದ್ದು, ಇದರ ನಿಗ್ರಹಕ್ಕೆ ಜಿಲ್ಲಾಡಳಿತ ಹಾಗೂ ರಾ
ಅಕ್ಕಿಯ ಜೊತೆಗೆ ಸಕ್ಕರೆ,ಚಾಹುಡಿ, ಧವಸಧಾನ್ಯದಂತ ಎಲ್ಲಾ ದಿನಬಳಕೆಯ ವಸ್ತುಗಳನ್ನು ಕೂಡ ಉಚಿತವಾಗಿ ಸರಕಾರ ಬಡವರ ಪ್ರತಿ ಮನೆಗೂ ತಲುಪಿಸುವ ವ್ಯವಸ್ಥೆ ಶೀಘ್ರ ನಡೆಯಬೇಕು ಎಂದರು. ಗ್ರಾಮ ಪಂಚಾಯಿತ್ ಗಳನ್ನು ಕೇಂದ್ರೀಕರಿಸಿಕೊಂಡು ಕಾರ್ಯಪಡೆಯ ಮೂಲಕ ಜನರಿಗೆ ನೆರವಾಗಬೇಕು ಎಂದು ಸಲಹೆ ನೀಡಿದ ಅವರು, ಅತಿಥಿ ಕಾರ್ಮಿಕರಿಗೆ ಪಂಚಾಯಿತಿಯಲ್ಲಿ ಗಂಜಿಕೇಂದ್ರ ತೆರೆದು ಅಲ್ಲಿ ಅವರಿಗೆ ಎಲ್ಲಾ ಸೌಕರ್ಯ ವನ್ನು ಒದಗಿಸುವಂತೆ ಒತ್ತಾಯಿಸಿದರು.
ಮಂಗಳವಾರ ಲಾಕ್ ಡೌನ್ ಸಡಿಲಿಸಿ ದಿನಸಿ ಸಾಮಾಗ್ರಿ ಖರೀದಿಗೆ ಅವಕಾಶ
