ಬಂಟ್ವಾಳ: ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್, ವತಿಯಿಂದ ಮುಖ್ಯಮಂತ್ರಿಗಳ ಕೊರೋನಾ ಪರಿಹಾರ ನಿಧಿಗೆ 50,000 ದೇಣಿಗೆಯನ್ನು ಬುಧವಾರ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಮೂಲಕ ಬ್ಯಾಂಕ್ ನ ಅಧ್ಯಕ್ಷ ಸುರೇಶ್ ಕುಲಾಲ್ ಹಸ್ತಾಂತರಿಸಿದರು.
ಬ್ಯಾಂಕ್ ನ ಉಪಾಧ್ಯಕ್ಷ ಪದ್ಮನಾಭ ವಿಟ್ಲ , ನಿರ್ದೇಶಕ ಜನಾರ್ಧನ ಬೊಂಡಾಲ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ ಉಪಸ್ಥಿತರಿದ್ದರು.

