ಬಂಟ್ವಾಳ: ಹೊರ ರಾಜ್ಯದಿಂದ ಆಗಮಿಸುತ್ತಿರುವ ಬಂಟ್ವಾಳದ ಜನತೆಗೆ ಸರಕಾರಿ ಕ್ವಾರಂಟೈನ್ ವ್ಯವಸ್ಥೆಯ ಹಿನ್ನಲೆಯಲ್ಲಿ ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಗುರುವಾರ ಸಭೆ ನಡೆಸಿದರು. 
ತಹಶೀಲ್ದಾರ್ ರಶ್ಮೀ ಎಸ್.ಆರ್.,ಕಾರ್ಯನಿರ್ವಹಣಾಧಿಕಾರಿ ರಾಜಣ್ಣ,ಡಿವೈಎಸ್ಪಿ ವೆಲೆಂಟಿನ್ ಡಿಸೋಜ,ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ ಮೊದಲಾದವರಿದ್ದರು. ಬಳಿಕ ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿಗಳು ಅರಳ ಗ್ರಾಮದ ಗುಡ್ಡೆಯಂಗಡಿಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆಗೆ ಭೇಟಿ ನೀಡಿ ಕ್ವಾರಂಟೈನ್ ನ ಸಿದ್ದತೆಯನ್ನು ಪರಿಶೀಲಿಸಿದರು.
