ಶ್ರೀನಿವಾಸಪುರ: ಆರೋಗ್ಯ ಕಾರ್ಯಕರ್ತರು ಹಾಗೂ ವಿದ್ಯಾವಂತ ಸಮುದಾಯ ಜನರಲ್ಲಿ ಆರೋಗ್ಯ ಜಾಗೃತಿ ಉಂಟು ಮಾಡಬೇಕು. ಸ್ವಚ್ಛತೆಗೆ ಆದ್ಯತೆ ನೀಡುವಂತೆ ತಿಳಿಸಬೇಕು ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜಿ.ಶ್ರೀನಿವಾಸ್ ಹೇಳಿದರು.1589898810183_19svp4ep
ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ  ರಾಷ್ಟ್ರೀಯ ಡೆಂಗೆ ನಿವಾರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡೆಂಗೆ, ಚಿಕುನ್‌ ಗುನ್ಯಾದಂಥ ರೋಗಗಳನ್ನು ತಡೆಯಲು ಸೊಳ್ಳೆಗಳನ್ನು ನಾಶಪಡಿಸಬೇಕು. ಅದಕ್ಕೆ ಪೂರಕವಾಗಿ ಮನೆ ಪರಿಸರವನ್ನು ಸ್ವಚ್ಚವಾಗಿಡಬೇಕು ಎಂದು ಹೇಳಿದರು.ಕ್ಷೇತ್ರ ಆರೊಗ್ಯ ಶಿಕ್ಷಣಾಧಿಕಾರಿ ಎಂ.ಆಂಜಿಲಮ್ಮ, , ಹಿರಿಯ ಪುರುಷ ಆರೋಗ್ಯ ಸಹಾಯಕ ಸುಬ್ರಮಣಿ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

By suddi9

Leave a Reply

Your email address will not be published. Required fields are marked *